ತಾಪಂ ಎದರು ಅಸಹಕಾರ ಚಳುವಳಿ ಆರಂಭ

Samagraphrabha
2 Min Read

ನರೇಗಾ ಹೊರಗುತ್ತಿಗೆ ಸಿಬ್ಬಂದಿಯ 6 ತಿಂಗಳ ಸಂಬಳ ಪಾವತಿಗೆ ಒತ್ತಾಯ

ಗದಗ: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಲೂಕು ವ್ಯಾಪ್ತಿಯ ಹೊರಗುತ್ತಿಗೆ ನೌಕರರು ಆರು ತಿಂಗಳಿ ವೇತನ ಪಾವತಿಗೆ ಒತ್ತಾಯಿಸಿ ಉದ್ಯೋಗ ಖಾತ್ರಿ ಯೋಜನೆಯ ಎಲ್ಲ ಕಾರ್ಯಗಳನ್ನು ಸ್ಥಗಿತಗೊಳಿಸಿ ಸೋಮವರ ಕಚೇರಿ ಎದರು ಅಸಹಕಾರ ಚಳುವಳಿ ಆರಂಭಿಸಿದರು.

ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಮತ್ತು ಕರ್ನಾಟ ರಾಜ್ಯ ಬೇರ್ ಫೂಟ್ ಟೆಕ್ನಿಷಿಯನ್ ಕ್ಷೇಮಾಭಿವೃದ್ಧಿ ಸಂಘ (ರಿ) ಇವುಗಳ ನಿರ್ದೇಶನದಂತೆ ಸಂಘದ ತಾಲೂಕು ಘಟಕದ ಸದಸ್ಯರು ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಗಳಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ. ಆದರೆ, ನೌಕರರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ಆಗದೆ ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ಮಕ್ಕಳ ಶಾಲಾ ದಾಖಲಾತಿ, ಕುಟುಂಬದ ನಿರ್ವಹಣೆ, ಕೌಟುಂಬಿಕ ಆರೋಗ್ಯ ಸಮಸ್ಯೆಗೆ ವೇತನ ಪಾವತಿಯಾಗದೆ ಇರುವುದು ನಾನಾ ಸಮಸ್ಯೆ ಕಾರಣವಾಗಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ತಾಲೂಕು ಹಂತದಲ್ಲಿ ಟಿಐಇಸಿ, ಟಿಸಿ, ಟಿಎಂಐಎಸ್, ಟಿಎಇ, ಟಿಎಎ, ಟಿಎಎಚ್, ಟಿಎಎಫ್ ಹಾಗೂ ಬಿಎಫ್‌ಟಿ ಸೇರಿ ವಿವಿಧ ಹುದ್ದೆಗಳಲ್ಲಿ 25ಕ್ಕೂ ಹೆಚ್ಚು ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಎಲ್ಲ ಸಿಬ್ಬಂದಿಯು 6 ತಿಂಗಳಿಂದ ಹಾಗೂ ಬಿಎಫ್‌ಟಿಯವರದು 4 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸರ್ಕಾರ ಕೂಡಲೇ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಮುಂದಿನ ದಿನಗಳಲ್ಲಿ ವೇತನ ಪಾವತಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಹಿಂದೆಯೂ ಸರ್ಕಾರದ ಗಮನಕ್ಕೆ ತರಲು ಪ್ರತಿಭಟನೆ ಮಾಡಿದ್ದೇವೆ ಈಗ ನರೇಗಾ ಕಾಮಗಾರಿಯನ್ನು ಸ್ಥಗಿತಗೊಳಿಸಿ ಅಸಹಕಾರ ಚಳುವಳಿ ಮಾಡಲು ರಾಜ್ಯ ಮತ್ತು ಜಿಲ್ಲಾ ಸಂಘದ ನಿರ್ದೇಶನದಂತೆ ಮುಂದಾಗಿದ್ದೇವೆ ಎಂದು ಸಂಘದ ಸದಸ್ಯರು ತಿಳಿಸಿದರು.

ಸಂಘದ ತಾಲೂಕು ಪ್ರತಿನಿಧಿಗಳಾದ ವೀರೇಶ ಬಸನಗೌಡ್ರ, ಚಂದ್ರಶೇಖರ ಹಳ್ಳಿ, ನವೀನ ಬಸರಿ, ಪ್ರದೀಪ ನರೇಗಲ್ಲ, ಮಂಜುನಾಥ ಕುಲಕರ್ಣಿ, ಅಜಯ ಅಬ್ಬಿಗೇರಿ, ದಿನೇಶ ಮಲ್ಲನಗೌಡ್ರ, ಪ್ರವೀಣ ದೂಳಣ್ಣನವರ, ಅರುಣ ಕಪ್ಪರದ, ಅಲ್ತಾಫ್ ಅಮ್ಮಿನಬಾವಿ, ಪ್ರಶಾಂತ ಯಾವಗಲ್ಲಮಠ, ಸಿದ್ದಪ್ಪ ಸೋಮನಕಟ್ಟಿ, ದಾವಲಸಾಬ್ ಚಲ್ಲಮರದ, ಬಸವರಾಜ ಪಟ್ಟಣದ, ಮಂಜುನಾಥ ಬಂಡಿವಾಡ, ಮೈಲಾರಪ್ಪ ಸೋಮನಕಟ್ಟಿ ಇತರರು ಇದ್ದರು.

- Advertisement -
Ad image

Share this Article