2,000 ರೂ. ಜಮಾ ಆಗದ ಗೃಹಲಕ್ಷ್ಮೀ ಫಲಾನುಭವಿಗಳು NCPI ಲಿಂಕ್ ಮಾಡಿಸಲು ವಿನಂತಿ: ಅಶೋಕ ಮಂದಾಲಿ

Samagraphrabha
1 Min Read

ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮನವಿ

ಗದಗ: 2,000 ರೂ. ಜಮಾ ಆಗದ ಗೃಹಲಕ್ಷ್ಮೀ ಫಲಾನುಭವಿಗಳು ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್‌ಲೈನ್ ಸೆಂಟರ್‌ಗಳಲ್ಲಿ NCPI ಲಿಂಕ್ ಮಾಡಿಸಬೇಕು ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೃಹಲಕ್ಷ್ಮೀ ಫಲಾನುಭವಿಗಳಿಗೆ 2,000 ರೂ. ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ತಮ್ಮ ಪಾಸ್‌ಬುಕ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ತೆಗೆದುಕೊಂಡು ತಮ್ಮ ಖಾತೆ ಇರುವ ಬ್ಯಾಂಕ್ ಇಲ್ಲವೇ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್‌ಲೈನ್ ಸೆಂಟರ್‌ಗಳಲ್ಲಿ ಎನ್‌ಸಿಪಿಐ ಲಿಂಕ್ ಮಾಡಿಸಬೇಕು.

ಮಾಹಿತಿಗಾಗಿ ಮುಳಗುಂದ ನಾಕಾ ಬಳಿಯ ಕೆಎಸ್‌ಆರ್‌ಟಿಸಿ ಡಿಪೋ ಎದುರಿಗಿನ ಉಪವಿಭಾಗೀಯ ಕಚೇರಿ ಆವರಣದಲ್ಲಿರುವ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಕಚೇರಿಗೆ ಕಚೇರಿ ಅವಧಿಯಲ್ಲಿ ಭೇಟಿ ನೀಡಬಹುದಾಗಿದೆ.

- Advertisement -
Ad image

ಈಗಾಗಲೇ ಗದಗ
ತಾಲೂಕಾದ್ಯಂತ ಗೃಹಲಕ್ಷ್ಮೀ ಯೋಜನೆಯಡಿ ಮೇ 2025ರ ವರೆಗೆ 81,073 ನೋಂದಣಿಯಾದ ಅರ್ಜಿಗಳ ಪೈಕಿ 80,588 ಅರ್ಜಿಗಳಿಗೆ ಮಂಜೂರಾತಿ ದೊರೆತಿದ್ದು, ಶೇ 99.4ರಷ್ಟು ಪ್ರಗತಿ ಸಾಧಿಸಲಾಗಿದೆ. ಗ್ಯಾರಂಟಿ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚ ಗ್ಯಾಂರಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

Share this Article