ಶೀಘ್ರದಲ್ಲೇ ರಾಜ್ಯದ ಎಲ್ಲ ಗುಂಡಿ ಮುಚ್ಚಲು ಕ್ರಮ: ರೈತರಿಗೆ ಬೆಳೆ ಹಾನಿ ಪರಿಹಾರಕ್ಕೆ ಕ್ರಮ
ಗದಗ : ಹಿಂದೂ ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಆಗಿದೆ ಅನಗತ್ಯ ಇರುವುದನ್ನು ಗಣತಿಯಿಂದ ತಗೆದು ಹಾಕುತ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದರು.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣತಿಗೆ 1,45,000 ಶಿಕ್ಷಕರನ್ನು ನೇಮಿಸಲಾಗಿದೆ. 15 ದಿನಗಳ ಕಾಲ ಮನೆ ಮನೆಗೂ ಹೋಗಿ ಸಮೀಕ್ಷೆ ಮಾಡುತ್ತಾರೆ
ಇದು ಜಾತಿ ಗಣತಿ, ಸಮೀಕ್ಷೆ ಅಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಿಕ್ಷೆ ಮಾಡ್ತಾರೆ. ಯಾರು ಅವಕಾಶದಿಂದ ವಂಚಿತರಾದವರಿಗೆ ಮೊದಲ ಆಧ್ಯತೆಗೆ ಸಮೀಕ್ಷೆ ಮಾಡಲಾಗುತ್ತಿದೆ.
ಸಮೀಕ್ಷೆ ಮೂಲಕ ಸಮಾಜ ಒಡೆಯುವ ಷಡ್ಯಂತರ ನಡೆತಿದೆ ಎಂದ ವಚನಾನಂದ ಶ್ರೀ ಹೇಳಿಕೆ ವಿಚಾರಕ್ಕೆ ಸಿಡಿ ಮಿಡಿಗೊಂಡರು.
ಮುಂದೆ ಕೇಂದ್ರ ಸರ್ಕಾರ ಜಾತಿಗಣತಿ ಮಾಡ್ತಾಯಿದೆ ಅಲ್ಲಿ ಷಡ್ಯಂತ್ರ ಇದೆನಾ.? ಅಂತ ಪ್ರಶ್ನೆ ಮಾಡಿದರು ಸಮೀಕ್ಷೆಗೆ ಕೆಲವು ಸಚಿವರು, ಶಾಸಕರು ವಿರೋಧ ಕುರಿತು ಮಾತನಾಡಿ, ಸಮಿಕ್ಷೆಗೆ ಸಚಿವರು, ಶಾಸಕರು ಯಾರೂ ವಿರೋಧ ಮಾಡಿಲ್ಲ. ಸಮಾಜದಲ್ಲಿ ಸಮಾನತೆ ತರಬೇಕಿದ್ರೆ ಅವಕಾಶದಿಂದ ವಂಚಿತರಾದವರಿಗೆ ಅವಕಾಶ ಕೊಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿಯಲು ಸಮಿಕ್ಷೆ ಮಾಡಲಾಗುತ್ತಿದೆ. ಹಿಂದೂಳಿದ ಆಯೋಗ ಸಮಿಕ್ಷೆ ಮಾಡುತ್ತಿದೆ. ಅದರಲ್ಲಿ ನಾವು ಮಧ್ಯೆ ಪ್ರವೇಶಿಸಲ್ಲ. ಹಿಂದೂ ಜೊತೆ ಕ್ರಿಶ್ಚಿಯನ್ ಪದ ಬಳಕೆ ಬಗ್ಗೆ ಮರು ಪರಿಶೀಲನೆ ಮಾಡಿ ಎಂದು ರಾಜ್ಯ ಪಾಲರು ಸಿಎಂ ಪತ್ರ ಬರೆದಿರುವ ಕುರಿತು ಮಾತನಾಡಿ, ಬಿಜೆಪಿಯವರು ಕಳುಹಿಸಿದ ಲೆಟರ್ ರಾಜ್ಯಪಾಲರು ನನಗೆ ಕಳುಹಿಸಿದ್ದಾರೆ. ಬಿಜೆಪಿ ಅವರ ಲೆಟರ್ ಪಾರ್ವಡ್ ಮಾಡಿದ್ದಾರೆ ಅಷ್ಟೇ. ಬಿಜೆಪಿಯವರು ರಾಜಕಿಯಕ್ಕಾಗಿ ಮಾಡುತ್ತಿದ್ದಾರೆ ಎಂದರು. ಇನ್ನು ಕುರುಬರನ್ನು ಎಸ್ಟಿಗೆ ಸೇರಿಸುವ ವಿಚಾರಕ್ಕೆ, ಬಿಜೆಪಿಯವರಿದ್ದಾಗ ಕುರುಬರನ್ನು ಎಸ್ಟಿ ಗೆ ಸೇರಿಸಬೇಕೆಂದು ಮಾಡಿದ್ದರು. ಈಶ್ವರಪ್ಪ, ಕಾಗಿನೇಲೆ ಸ್ವಾಮಿಜಿಗಳು ಈ ಬಗ್ಗೆ ಶಿಪಾರಸ್ಸು ಕೇಂದ್ರಕ್ಕೆ ಕಳುಹಿಸಿದ್ದರು. ಈ ಬಗ್ಗೆ ಅವರೇ ಉತ್ತರಿಸಬೇಕು. ಇನ್ನು ಎಸ್.ಸಿ, ಎಸ್ ಟಿ ಪಟ್ಟಿಗೆ ಸೇರಿಸುವುದು ಕೇಂದ್ರದ ಕೇಲಸವಾಗಿದೆ. ಮತ ಕಳ್ಳತನ ಬಗ್ಗೆ ರಾಹುಲ್ ಗಾಂಧಿ ಸತ್ಯ ಹೇಳಿದ್ದಾರೆ. 6 ಸಾವಿರ ಮತಗಳನ್ನು ಕೈಬಿಡಲಾಗಿದೆ. ಆಳಂದ ಮತಗಳ್ಳತನ ಬಗ್ಗೆ ಎಸ್.ಐ.ಟಿ ತನಿಖೆ ನಡೆಯುತ್ತಿದೆ ಎಂದರು. ಬೆಳೆ ಹಾನಿ ಬಗ್ಗೆ ಸರ್ವೆ ನಡೆಸಿ ಪರಿಹಾರ ಕೊಡ್ತಿವಿ. ಮಳೆ ಈ ಬಾರಿ ಜಾಸ್ತಿ ಆಗಿದೆ. ಇನ್ನು ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಮಾತನಾಡಿ, ಕಳೆದ ವರ್ಷ ಹಾಗೂ ಈ ವರ್ಷ ಸಾಕಷ್ಟು ಮಳೆ ಆಗಿರೊದ್ರಿಂದ ರಸ್ತೆಗಳು ಕೆಟ್ಟು ಹೋಗಿದ್ದಾವೆ. ಈ ಬಗ್ಗೆ ಮಿಟಿಂಗ್ ಮಾಡಿ, ರಸ್ತೆ ದುರಸ್ಥಿ ಮಾಡ್ತಿವಿ. ಬಿಜೆಪಿಯವರಿರುವಾಗ ಒಂದು ದಿನ ಗುಂಡಿ ಮುಚ್ಚಲಿಲ್ಲ ಎಂದರು.

